ರಾಜ್ಯ ಸರಕಾರಿ ನೌಕರರ ವೇತನ ಹೆಚ್ಚಳ ಸಮರ್ಥಿಸಿಕೊಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹಣ ಬಡವರು ಮತ್ತು ಮಧ್ಯಮ ವರ್ಗದವರ ಕೈಯಲ್ಲಿರಬೇಕೇ ಹೊರತು ಅಂಬಾನಿ ಮತ್ತು ಆದಾನಿಯಲ್ಲಿರುವುದರಿಂದ ದೇಶದ ಆರ್ಥಿಕತೆಗೆ ಯಾವುದೇ ಲಾಭವಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ದೇಶದ ಆರ್ಥಿಕ ನೀತಿಗಳು ಬಡವರಿಗೆ ಲಾಭವಾಗುವಂತಿರಬೇಕು. ದೈನಂದಿನ ವೆಚ್ಚದಲ್ಲಿ ಹೆಚ್ಚಳವಾಗಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ದೀರ್ಘಾವಧಿಯಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಲಾಭವಾಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.