ಮಾನನಷ್ಟ ಮೊಕದ್ದಮೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು

ಶುಕ್ರವಾರ, 8 ಜುಲೈ 2016 (16:29 IST)
ಬಿಜೆಪಿ ಸಂಸದ ರಮೇಶ್ ಬಿಧೂರಿ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ.
 
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ವಿಂದರ್ ಸಿಂಗ್, ನ್ಯಾಯಾಲಯಕ್ಕೆ ಹಾಜರಾಗಿದ್ದ ಕೇಜ್ರಿವಾಲ್‌ಗೆ 10 ಸಾವಿರ ರೂಪಾಯಿಗಳ ವೈಯಕ್ತಿಕ ಬಾಂಡ್‌ ಷರತ್ತಿನೊಂದಿಗೆ ಜಾಮೀನು ನೀಡಿದ್ದಾರೆ.
 
ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾದ ಹಿನ್ನೆಲೆಯಲ್ಲಿ ಕೋರ್ಟ್ ಕೇಜ್ರಿವಾಲ್‌ಗೆ ನೋಟಿಸ್ ಜಾರಿ ಮಾಡಿತ್ತು. ಇದೀಗ ವಿಚಾರಣೆಯನ್ನು ಆಗಸ್ಟ್ 6 ಕ್ಕೆ ಮುಂದೂಡಿದೆ.
 
ದೆಹಲಿ ಸಿಎಂ ಕೇಜ್ರಿವಾಲ್ ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಬಿಜೆಪಿ ಸಂಸದ ರಮೇಶ್ ಬಿಧೂರಿ ವಿರುದ್ಧ ಅಪರಾಧಿಕ ಪ್ರಕರಣಗಳು ನೆನೆಗುದಿಯಲ್ಲಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ