ಬಿಜೆಪಿ ಕೂಡಾ ಚುನಾವಣೆ ಪ್ರಣಾಳಿಕೆಯಲ್ಲಿ ದೆಹಲಿಗೆ ರಾಜ್ಯಮಟ್ಟದ ಸ್ಥಾನಮಾನ ನೀಡಲು ಬದ್ಧ ಎಂದು ಘೋಷಿಸಿದ್ದ ಬಗ್ಗೆ ಸುದ್ದಿಗಾರರು ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ಪ್ರಶ್ನಿಸಿದಾಗ, ನವದೆಹಲಿಗೆ ಸಂಪೂರ್ಣ ರಾಜ್ಯಮಟ್ಟದ ಸ್ಥಾನ ನೀಡಬೇಕು ಎನ್ನುವ ಕುರಿತಂತೆ ದೇಶಾದ್ಯಂತ ಒಮ್ಮತದ ಅಭಿಪ್ರಾಯ ವ್ಯಕ್ತವಾಗುವವರೆಗೆ ರಾಜ್ಯಮಟ್ಟದ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.