ಕಾರು ಅಪಘಾತ: ಅಪಾಯದಿಂದ ಪಾರಾದ ಕೇರಳ ಸಿಎಂ ಒಮನ್ ಚಾಂಡಿ

ಭಾನುವಾರ, 28 ಫೆಬ್ರವರಿ 2016 (15:37 IST)
ಕೇರಳ ಮುಖ್ಯಮಂತ್ರಿ ಒಮನ್ ಚಾಂಡಿ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತಕ್ಕೀಡಾಗಿದ್ದು, ಆದರೆ, ಚಾಂಡಿ ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಿನ್ನೆ ರಾತ್ರಿ ಕೋಳಿಕ್ಕೋಡ್‌ನಲ್ಲಿ ನಡೆದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಾಂಡಿ, ತಮಮ್ ಸ್ವಗ್ರಾಮವಾದ ಪುದುಪಳ್ಳಿಗೆ ತೆರಳುತ್ತಿರುವ ಸಂದರ್ಭದಲ್ಲಿ ಇಂದು ಬೆಳಗಿನ ಜಾವ ಸುಮಾರು 2.45 ಗಂಟೆಗೆ ವೈಕೋಂ- ಎಟ್ಟು ಮಾನೂರ್ ರಸ್ತೆಯಲ್ಲಿರುವ ಕನಕರಿ ಬಳಿ ಅಪಘಾತ ಸಂಭವಿಸಿದೆ. 
 
ಕಾರಿನ ಮುಂಬಾಗದಲ್ಲಿ ಕುಳಿತಿದ್ದ ಮುಖ್ಯಮಂತ್ರಿಯವರ ಗನ್‌‍ಮ್ಯಾನ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಒಮನ್ ಚಾಂಡಿ ಪ್ರಯಾಣಿಸುತ್ತಿದ್ದ ಕಾರು ಪಂಕ್ಚರ್ ಆಗಿರುವುದು ಅಪಘಾತಕ್ಕೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ನಿಖರವಾದ ಕಾರಣದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಚಾಂಡಿ ಪೈಲಟ್‌ ಕಾರಿನಲ್ಲಿ ತಮ್ಮ ಗ್ರಾಮಕ್ಕೆ ಪ್ರಯಾಣಿಸಿದರು ಎಂದು ಮೂಲಗಳು ತಿಳಿಸಿವೆ.
 
ಪುದುಪಳ್ಳಿಯಲ್ಲಿ ಭೇಚಿಯಾದ ಪತ್ರಕರ್ತರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಚಾಂಡಿ, ನಾನು ಸೀಟ್ ಬೆಲ್ಟ್ ಕಟ್ಟಿಕೊಂಡಿದ್ದರಿಂದ ಅಪಾಯದಿಂದ ಪಾರಾಗಿದ್ದೇನೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ