ಕೇರಳ ಮುಖ್ಯಮಂತ್ರಿ ಒಮನ್ ಚಾಂಡಿ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತಕ್ಕೀಡಾಗಿದ್ದು, ಆದರೆ, ಚಾಂಡಿ ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ರಾತ್ರಿ ಕೋಳಿಕ್ಕೋಡ್ನಲ್ಲಿ ನಡೆದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಾಂಡಿ, ತಮಮ್ ಸ್ವಗ್ರಾಮವಾದ ಪುದುಪಳ್ಳಿಗೆ ತೆರಳುತ್ತಿರುವ ಸಂದರ್ಭದಲ್ಲಿ ಇಂದು ಬೆಳಗಿನ ಜಾವ ಸುಮಾರು 2.45 ಗಂಟೆಗೆ ವೈಕೋಂ- ಎಟ್ಟು ಮಾನೂರ್ ರಸ್ತೆಯಲ್ಲಿರುವ ಕನಕರಿ ಬಳಿ ಅಪಘಾತ ಸಂಭವಿಸಿದೆ.
ಮುಖ್ಯಮಂತ್ರಿ ಒಮನ್ ಚಾಂಡಿ ಪ್ರಯಾಣಿಸುತ್ತಿದ್ದ ಕಾರು ಪಂಕ್ಚರ್ ಆಗಿರುವುದು ಅಪಘಾತಕ್ಕೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ನಿಖರವಾದ ಕಾರಣದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಚಾಂಡಿ ಪೈಲಟ್ ಕಾರಿನಲ್ಲಿ ತಮ್ಮ ಗ್ರಾಮಕ್ಕೆ ಪ್ರಯಾಣಿಸಿದರು ಎಂದು ಮೂಲಗಳು ತಿಳಿಸಿವೆ.