ಇದೇ ವೇಳೆ, ಪ್ರತಿಕ್ರಿಯಿಸಿದ ಖರ್ಗೆ, ಸಿಎಂ ಮುಫ್ತಿ ಹೇಳಿಕೆ ನೀಡಿದ ವೇಳೆಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕೂಡ ಈ ಹೇಳಿಕೆಯನ್ನು ತಿಳಿಸಿದ್ದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ಸದನಕ್ಕೆ ಆಗಮಿಸಿ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಲಿ, ಅಲ್ಲದೆ ಅವರೂ ಆ ಹೇಳಿಕೆಯನ್ನು ಖಂಡಿಸಲಿ. ಅಷ್ಟೇ ಅಲ್ಲ ಸದನದಲ್ಲಿ ಖಂಡನಾ ನಿರ್ಣಯವನ್ನು ಮಂಡಿಸಬೇಕು. ಜೊತೆಗೆ ಮುಫ್ತಿ ಅವರಿಗೆ ಖಡಕ್ ಸೂಚನೆಯನ್ನು ರವಾನಿಸಬೇಕೆಂದು ಒತ್ತಾಯಿಸಿದರು.