ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಆಗಿ ಕಿರಣ್ ಭೇಡಿ ಅಧಿಕಾರ ಸ್ವೀಕಾರ

ಭಾನುವಾರ, 29 ಮೇ 2016 (14:51 IST)
ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಪುದುಚೇರಿಯ ಲೆಫ್ಟೆನೆಂಟ್ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
 
ಕಳೆದ ಶನಿವಾರದಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುದುಚೇರಿ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲ್ಲಿ ಎಂದು ಬಯಸುವುದಾಗಿ ತಿಳಿಸಿದ್ದಾರೆ.
 
ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಕೃಷಿ, ಶಿಕ್ಷಣ, ಪ್ರವಾಸೋದ್ಯಮ, ಹೆಲ್ತ್ ಕೇರ್, ಕೈಗಾರಿಕೆ, ಮಹಿಳಾ ಯೋಗಕ್ಷೇಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲಿ ಎನ್ನುವುದೇ ನನ್ನ ಬಯಕೆ ಎಂದು ಹೇಳಿದ್ದಾರೆ.
 
ಪುದುಚೇರಿ ಪ್ರವಾಸೋದ್ಯಮದಲ್ಲಿ ಗೋವಾ ಸೇರಿದಂತೆ ದೇಶದ ಯಾವುದೇ ಪ್ರವಾಸಿ ತಾಣಕ್ಕಿಂತಲೂ ಕಡಿಮೆಯಲ್ಲಿ. ಮೊದಲು ಪ್ರವಾಸೋದ್ಯಮ ಕೇಂದ್ರವಾಗಿಸಲು ಆದ್ಯತೆ ನೀಡುತ್ತೇನೆ ಎಂದು ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ