ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಪುತ್ರ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಹಿರಿಯ ಜೆಡಿಯು ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತಮ್ಮ 'ರಾಜಕೀಯ ಗುರು' ಎಂದು ಬಣ್ಣಿಸಿದ್ದು ಅವರಿಂದ ತಾವು ಉತ್ತಮ ಆಡಳಿತದ ಪಾಠವನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಬಿಹಾರ್ ವಿಧಾನಸಭೆಯ 95ನೇ ಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, 'ನಾನು ನಿತೀಶ ಅವರನ್ನು ರಾಜಕೀಯ ಗುರುವಾಗಿ ನೋಡುತ್ತೇನೆ', ಎಂದಿದ್ದಾರೆ.
'ಅವರು ಜಾತ್ಯತೀತ ಸಮ್ಮಿಶ್ರ ಸರ್ಕಾರದ ಮಖ್ಯಸ್ಥರಾಗಿದ್ದು, ಅವರದೇ ಶೈಲಿಯಲ್ಲಿ ಆಡಳಿತ ನಡೆಸುತ್ತಾರೆ. ಅವರ ಕಾರ್ಯವೈಖರಿಯನ್ನು ನಾನು ಮತ್ತು ಉಳಿದ ಯುವಕರು ಕಲಿತುಕೊಳ್ಳುತ್ತಿದ್ದೇವೆ', ಎಂದು ಅವರು ಹೇಳಿದ್ದಾರೆ.