ಮಹಾಮೈತ್ರಿಯ ಪಾಲುದಾರ ಪಕ್ಷವಾದ ಕಾಗ್ರೆಸ್ ಶಾಸಕರೊಬ್ಬರು ಅಪ್ರಾಪ್ತ ಬಾಲಕಿಯ ಅಪಹರಣದಲ್ಲಿ ಆರೋಪಿಯಾಗಿದ್ದಾರೆ, ಜೆಡಿಯು ಶಾಸಕರು ಡಿಎಸ್ಪಿಗೆ ಜೀವ ಬೆದರಿಕೆಯೊಡ್ಡಿದ್ದಾರೆ. ಆರ್ಜೆಡಿ ಶಾಸಕ ಪೊಲೀಸರಿಗೆ ಬೆದರಿಕೆ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಅಪಹರಣ, ಹತ್ಯೆ, ಜೀವಬೆದರಿಕೆಯಂತಹ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿವೆ. ಲಾಲು ಮತ್ತು ಅವರ ಇಬ್ಬರು ಪುತ್ರರ ವಿರುದ್ಧದ ಪ್ರಕರಣಗಳನ್ನು ಸರಕಾರ ಹಿಂಪಡೆದಿರುವುದು ಹೇಯ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.