ಸಹಕೈದಿಗಳಿಂದ ಶಶಿಕಲಾಗೆ ಜೀವಕ್ಕೆ ಆಪತ್ತು!

ಶುಕ್ರವಾರ, 17 ಫೆಬ್ರವರಿ 2017 (08:43 IST)
ಅಕ್ರಮ ಆಸ್ತಿ ಪ್ರಕರಣದಡಿಯಲ್ಲಿ ಜೈಲು ಸೇರಿರುವ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರ ಮೇಲೆ ಜೈಲಿನಲ್ಲಿ ಹಲ್ಲೆಯಾಗುವ ಭೀತಿ ಇರುವುದರಿಂದ ಅವರಿರುವ ಸೆಲ್‌ಗೆ ಬಿಗಿ ಭದ್ರತೆ ನೀಡಲಾಗಿದೆ.

ಜೈಲಿನಲ್ಲಿರುವ ತಮಿಳು ಖೈದಿಗಳಿಂದ ಶಶಿಕಲಾ ಅವರಿಗೆ ಜೀವ ಬೆದರಿಕೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು.
 
ಇನ್ನು ನಿನ್ನೆ ಅವರ ಭೇಟಿಗೆ ಬಂದಿದ್ದ ಎಐಡಿಎಂಕೆ ನಾಯಕರು, ಬೆಂಬಲಿಗರು ಮತ್ತು ಕಾರ್ಯಕರ್ತರಿಗೆ ಭದ್ರತೆಯ ದೃಷ್ಟಿಯಿಂದ ಶಶಿಕಲಾ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ. 
 
ಹೇಗಿತ್ತು ಶಶಿಕಲಾ ದಿನಚರಿ: ಇಂದು ಮುಂಜಾನೆ 6 ಗಂಟೆಗೆ ಹಾಸಿಗೆಯಿಂದ ಎದ್ದ ಶಶಿಕಲಾ 6.30ರವರೆಗೆ ಯೋಗಾಭ್ಯಾಸ ನಡೆಸಿದರು. ಬಳಿಕ ಜೈಲಿನ ಮೆನುವಿನಂತೆ ಟೀ ಕುಡಿದು ಟೊಮೆಟೋ ಬಾತ್ ಸೇವಿಸಿದ ಅವರೀಗ ಪಳನಿಸ್ವಾಮಿ ಭೇಟಿಗೆ ಕಾದು ಕುಳಿತಿದ್ದಾರೆ.ಪಳನಿಸ್ವಾಮಿ ಜತೆ ನಿನ್ನೆ ಅಧಿಕಾರ ಸ್ವೀಕರಿಸಿರುವ ಇತರ ಸಚಿವರು ಸಹ ಆಗಮಿಸುವ ಸಾಧ್ಯತೆಗಳಿವೆ.

ವೆಬ್ದುನಿಯಾವನ್ನು ಓದಿ