ಸೆಲ್ಫಿ ನೆಪದಲ್ಲಿ ಮಹಿಳೆ, ಮಕ್ಕಳನ್ನು ಸೇತುವೆಯಿಂದ ತಳ್ಳಿದ ಲಿವ್ ಇನ್ ಪಾರ್ಟ್ನರ್ !

ಮಂಗಳವಾರ, 8 ಆಗಸ್ಟ್ 2023 (10:19 IST)
ಅಮರಾವತಿ : ಸೆಲ್ಫಿ ನೆಪದಲ್ಲಿ ಮಹಿಳೆ, 1 ವರ್ಷ ಹಾಗೂ 13 ವರ್ಷದ ಮಕ್ಕಳನ್ನು ಮಹಿಳೆಯ ಲಿವ್ ಇನ್ ಪಾರ್ಟ್ನರ್ ತುಂಬಿ ಹರಿಯುತ್ತಿದ್ದ ನದಿಯ ಸೇತುವೆಯಿಂದ ತಳ್ಳಿದ್ದು, ಘಟನೆಯಲ್ಲಿ 13ರ ಬಾಲಕಿ ಪವಾಡಸದೃಶದಂತೆ ತನ್ನ ಪ್ರಾಣ ಉಳಿಸಿಕೊಂಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

13 ವರ್ಷದ ಬಾಲಕಿ ಕೀರ್ತನ, ತನ್ನ ತಾಯಿ ಪುಪ್ಪಳ ಸುಹಾಸಿನಿ (36) ಹಾಗೂ ಬಾಲಕಿಯ 1 ವರ್ಷದ ಸಹೋದರಿ ಜರ್ಸಿಯನ್ನು ಭಾನುವಾರ ಮುಂಜಾನೆ ಗೋದಾವರಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯಿಂದ ತಳ್ಳಲಾಗಿತ್ತು. ಬಾಲಕಿ ಈ ವೇಳೆ ಸೇತುವೆಗೆ ಅಳವಡಿಸಲಾಗಿದ್ದ ಪ್ಲಾಸ್ಟಿಕ್ ಪೈಪ್ ಅನ್ನು ಬಿಗಿಯಾಗಿ ಹಿಡಿದು, ಪೊಲೀಸರ ಸಹಾಯಕ್ಕಾಗಿ ತನ್ನ ಜೇಬಿನಿಂದ ಫೋನ್ ತೆಗೆದುಕೊಂಡು 100ಕ್ಕೆ ಕರೆ ಮಾಡಿದ್ದಾಳೆ.

ಮಹಿಳೆ ಹಾಗೂ ಮಕ್ಕಳನ್ನು ಸೇತುವೆಗೆ ತಳ್ಳಿದ ಆರೋಪಿ ಉಳವ ಸುರೇಶ್ ಸುಹಾಸಿನಿಯ ಲಿವ್ ಇನ್ ಪಾರ್ಟ್ನರ್ ಆಗಿದ್ದ. ಗಂಡನಿಂದ ದೂರವಾಗಿದ್ದ ಸುಹಾಸಿನಿಗೆ ಸುರೇಶ್ ಪರಿಚಯವಾಗಿತ್ತು. ಹೀಗೆ ಸುರೇಶ್ ಹಾಗೂ ಸುಹಾಸಿನಿ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದರು.

ಭಾನುವಾರ ಇಬ್ಬರು ಮಕ್ಕಳು ಹಾಗೂ ಸುಹಾಸಿನಿಯನ್ನು ಸುರೇಶ್ ಪಿಕ್ನಿಕ್ ಕರೆದುಕೊಂಡು ಹೋಗಿದ್ದ ಮಾತ್ರವಲ್ಲದೇ ಗೆಳತಿ ಹಾಗೂ ಆಕೆಯ ಮಕ್ಕಳನ್ನು ಕೊಲ್ಲುವ ಸಂಚು ರೂಪಿಸಿದ್ದ. ಸೆಲ್ಫಿ ನೆಪದಲ್ಲಿ ಗೋದಾವರಿ ನದಿ ಬಳಿ ಕಾರು ನಿಲ್ಲಿಸಿ, ಮೂವರನ್ನು ಸೇತುವೆ ಅಂಚಿಗೆ ಕರೆದುಕೊಂಡು ಹೋಗಿ ನದಿಗೆ ತಳ್ಳಿದ್ದಾನೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ