ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಗೆ ಒಂದು ದಿನ ಬಾಕಿ ಇದ್ದು ಸಮೀಕ್ಷೆಗಳನ್ನು ನಂಬಿ ಕುಳಿತಿರುವ ಬಿಜೆಪಿ ಅಧಿಕಾರದ ಲೆಕ್ಕಾಚಾರದಲ್ಲಿ ತೊಡಗಿದೆ. ನಾಳೆ ಸಿಗಲಿರುವ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಬಹುಮತಗಳಿಸಿ ಎನ್ಡಿಎ ಅಧಿಕಾರಕ್ಕೆ ಬಂದರೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಧ್ಯಕ್ಷರಾಗಬಹುದು ಎಂದು ವರದಿಯಾಗಿದೆ.
ಬುಧವಾರ ಮೋದಿಯವರ ಜತೆ ಅವರ ಗಾಂಧೀನಗರದ ನಿವಾಸದಲ್ಲಿ ನಡೆಸಿದ ಸಭೆಯಲ್ಲಿ, ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್, ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಅರುಣ್ ಜೆಟ್ಲಿ ಪಾಲ್ಗೊಂಡಿದ್ದರು.
ಆದರೆ ಇದನ್ನು ತಳ್ಳಿ ಹಾಕಿರುವ ಆರ್ಎಸ್ಎಸ್ " ಈ ಸಭೆಗಳು ಆತಂಕದ ಪರಿಸ್ಥಿತಿಯ ಕಾರಣಕ್ಕೆ ನಡೆದಿಲ್ಲ. ಸಭೆಯಲ್ಲಿ ಪಾಲ್ಗೊಂಡಿರುವ ನಾಯಕರು ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ. ಎಲ್.ಕೆ. ಆಡ್ವಾಣಿ, ಸುಷ್ಮಾ ಸ್ವರಾಜ್ ಒಂದೇ ಒಂದು ಬಾರಿ ಕೂಡ ತಾವು ಅಸಂತುಷ್ಠರಾಗಿದ್ದೇವೆ ಎಂದು ಹೇಳಿಲ್ಲ. ಪಕ್ಷದಲ್ಲಿ ಎಲ್ಲವನ್ನು ಸರಿಪಡಿಸಲು ಸಂಘ ರಿಮೋಟ್ ಕಂಟ್ರೋಲ್ ನ್ನು ಬಳಸುವುದಿಲ್ಲ ಎಂದು ಹೇಳಿದೆ.