ವಿವಿಐಪಿ ಕಾಫ್ಟರ್ ಹಗರಣದಲ್ಲಿ ಕಾಂಗ್ರೆಸ್ ಭಾಗಿಯಾಗಿದೆ. ಅದರ ಬಗ್ಗೆ ಕೂಡ ಸದನದಲ್ಲಿ ಚರ್ಚೆಯಾಗಬೇಕು ಎಂದು ಅವರು ಉತ್ತರಿಸಿದರು. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತ ಪಡಿಸಿತು. ಕೈ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು.ಸ್ವತಂತ್ರ ಭಾರತದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಆಡಳಿತಾರೂಢ ಪಕ್ಷವೇ ಕಲಾಪಕ್ಕೆ ಅಡ್ಡಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಆರೋಪಿಸಿದರು.
ಸಂಸತ್ ಗದ್ದಲಕ್ಕೆ ತೀವ್ರ ಅಸಮಧಾನ ವ್ಯಕ್ತ ಪಡಿಸಿರುವ ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ತಮಗೆ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎನ್ನಿಸುತ್ತಿದೆ ಎಂದಿದ್ದಾರೆ. ಕಳೆದ ವಾರ ಸಹ ಅವರು ಸ್ಪೀಕರ್ ಸುಮಿತ್ರಾ ಮಹಾಜನ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಬಗ್ಗೆ ಕೋಪವನ್ನು ಹೊರಹಾಕಿದ್ದರು.