ರಾಷ್ಟ್ರಪತಿ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಸೂಕ್ತ ಅಭ್ಯರ್ಥಿ ಹುಡುಕಾಟ ನಡೆಸುತ್ತಿರುವ ಸಂದರ್ಭದಲ್ಲಿಯೇ,ರಾಷ್ಟ್ರಪಿತ ಮಹಾತ್ಮಾ ಗಾಂಧಿ ದಲಿತ ಮಹಿಳೆ ಭಾರತದ ಮೊದಲ ರಾಷ್ಟ್ರಪತಿಯಾಗಬೇಕು ಎಂದು ಬಯಸಿದ್ದರು. ಆದರೆ, ಅವರ "ಮೂಲಭೂತ ಸಲಹೆ" ಯನ್ನು ತಿರಸ್ಕರಿಸಲಾಗಿತ್ತು ಎನ್ನುವ ಸಂಗತಿ ಬಹಿರಂಗವಾಗಿದೆ.
1947ರ ಜೂನ್ 2 ರಂದು ಚಕ್ರಯ್ಯ ನೆನಪಿಗಾಗಿ ಆಯೋಜಿಸಲಾಗಿದ್ದ ಪ್ರಾರ್ಥನಾ ಸಭೆಯಲ್ಲಿ ಗಾಂಧಿಯವರು, ಒಂದು ವೇಳೆ ಚಕ್ರಯ್ಯ ಬದುಕಿದ್ದಲ್ಲಿ ಅವರ ಹೆಸರನ್ನು ರಾಷ್ಟ್ರಪತಿ ಹುದ್ದೆಗೆ ಪ್ರಸ್ತಾಪಿಸುತ್ತಿದ್ದೆ ಎಂದು ಹೇಳಿರುವುದು ಪುಸ್ತಕದಲ್ಲಿ ಬಹಿರಂಗವಾಗಿದೆ.