ದೇಶದಾದ್ಯಂತ ಏಕರೂಪ ನಾಗರಿಕ ನೀತಿಸಂಹಿತೆ ಮತ್ತು ವೈಯಕ್ತಿಕ ಕಾನೂನುಗಳ ಸುಧಾರಣೆ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ವಿದೇಶದಲ್ಲಿರುವ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ದೂರವಾಣಿ ಕರೆ ಮಾಡಿ ಟ್ರಿಪಲ್ ತಲಾಖ್ ಹೇಳುವ ಮೂಲಕ ವಿಚ್ಛೇದನ ನೀಡಿದ್ದಾನೆ.
ಮೂಲತಃ ಮುಝಪ್ಫರ್ನಗರದ ಪೀಡಿತೆ ಕಳೆದ ಎರಡು ವರ್ಷಗಳ ಹಿಂದೆ ಶಹನವಾಜ್ನನ್ನು ವರಿಸಿದ್ದಳು. ದಂಪತಿಗೆ ಒಂದು ಹೆಣ್ಣುಮಗುವಿದೆ. ಮಗು ಜನಿಸುವವರೆಗೆ ಎಲ್ಲವೂ ಚೆನ್ನಾಗಿತ್ತು, ಬಳಿಕ ಪತಿ ಮತ್ತು ಆತನ ಪೋಷಕರು ನನ್ನನ್ನು ನಿರ್ಲಕ್ಷಿಸಲು ಪ್ರಾರಂಭಿಸಿದರು ಎಂದಾಕೆ ಆರೋಪಿಸಿದ್ದಾಳೆ.