ಚಲಿಸುತ್ತಿರುವ ಬಸ್ ಕಿಟಕಿಯಿಂದ ಕೆಳಕ್ಕೆ ಜಿಗಿದ ಯುವಕ

ಶುಕ್ರವಾರ, 6 ಜನವರಿ 2017 (12:43 IST)
ಯುವಕನೋರ್ವ ಚಲಿಸುತ್ತಿರುವ ಬಸ್‌ನಿಂದ ಕೆಳಕ್ಕೆ ಹಾರಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ನಡೆದಿದೆ. ಗಾಯಗೊಂಡಿರುವ ಯುವಕನನ್ನು ತಾಲ್ಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಹೂವಿನ ಹಿಪ್ಪರಗಿಯಿಂದ ಬಸವನ ಬಾಗೇವಾಡಿ ಕಡೆ ಚಲಿಸುತ್ತಿದ್ದ ಬಸ್ ಏರಿದ್ದ ಯುವಕ ಮಾರ್ಗ ಮಧ್ಯೆ ಏಕಾಏಕಿ ಬಸ್‌ ಕಿಟಕಿಯಿಂದ ಕೆಳಕ್ಕೆ ಜಿಗಿದಿದ್ದಾನೆ. 
 
ಯುವಕನ ಕೈ ಮುರಿದಿದ್ದು, ಮುಖಕ್ಕೆ ಗಂಭೀರ ಗಾಯಗಳಾಗಿದೆ. ಆತನನ್ನು ತಾಲ್ಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
 
ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ