ಸೂಕ್ತ ಕೆಲಸ ಸಿಗಲಿಲ್ಲವೆಂದು ಬೇಸರಗೊಂಡಿದ್ದ ಯುವಕ ಕಾರ್ತಿಕ್ನಿಗೆ ಸದ್ಯ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸಹ ಸಂಬಳವನ್ನು ನೀಡಿರಲಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಮೂರು ಅಂತಸ್ತಿನ ಕಟ್ಟಡವನ್ನೇರಿದ ಆತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ 45 ನಿಮಿಷಗಳ ಕಾಲ ಬೆದರಿಕೆ ಹಾಕಿದ್ದಾನೆ. ಕಟ್ಟಡದ ಸುತ್ತ ನೆರೆದ ಜನರು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆದಿದ್ದಾರೆ. ಆತನನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದ್ದಾಗಲೇ ಆತ ಏಕಾಏಕಿ ಕಟ್ಟಡದಿಂದ ಜಿಗಿದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಆತ ದಾರಿ ಮಧ್ಯ ಸಾವನ್ನಪ್ಪಿದ್ದಾನೆ.