ಕೃಷಿಕಾರ್ಮಿಕನಾಗಿರುವ ರಕ್ತು ಪ್ರಸಾದ್ ಎಂಬ ಪಾಪಿ ತಂದೆಯೇ ಈ ದುಷ್ಕೃತ್ಯವನ್ನೆಸಗಿದ್ದು , ಗುರುವಾರ ಪ್ರಾತಃ ಕಾಲ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತಳ ಗಂಡ ನೀಡಿದ ದೂರಿನ ಆಧಾರದ ಮೇಲೆ ಮೀನಾಪುರ ಠಾಣೆಯ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ.
ಎರಡು ದಿನಗಳ ಹಿಂದೆ ಆಕೆ ಗಂಡನ ಜತೆ ತವರಿಗೆ ಬಂದಿದ್ದಳು. ಬುಧವಾರ ರಾತ್ರಿ ಕುಡಿದು ಮನೆಗೆ ಬಂದ ರಕ್ತು ತನ್ನ ಅಳಿಯ ಮಗಳು ನಿದ್ರಿಸುತ್ತಿದ್ದ ಕೋಣೆಗೆ ಬಂದು ಅಳಿಯನ ಬಳಿ ಜಗಳವಾಡತೊಡಗಿದ. ತಕ್ಷಣ ಮನೆಯಿಂದ ಆಚೆ ಹೋಗದಿದ್ದರೆ ಕೊಲ್ಲುವುದಾಗಿ ಆತ ಅಳಿಯನಿಗೆ ಬೆದರಿಕೆ ಹಾಕಿದ. ಆತ ಮನೆಯಿಂದ ಆಚೆ ಹೋದ ಮೇಲೆ ಮಗಳ ಮೇಲೆರಗಿ ಅತ್ಯಾಚಾರಕ್ಕೆ ಪ್ರಯತ್ನಿಸಿದ. ಆತನಿಗೆ ಪ್ರತಿರೋಧ ತೋರಿದ ಆಕೆ ಸಹಾಯಕ್ಕಾಗಿ ಕೂಗಿಕೊಂಡಳು. ಇದರಿಂದ ಸಿಟ್ಟಿಗೆದ್ದ ಆತ ಅಲ್ಲೇ ಇದ್ದ ಮೇವು ಕತ್ತರಿಸುವ ಸಾಧನದಿಂದ ಆಕೆಯ ಕುತ್ತಿಗೆ, ಕೈ, ಹೊಟ್ಟೆ, ಕಾಲುಗಳಿಗೆ ಮಾರಕವಾಗಿ ದಾಳಿ ನಡೆಸಿ ಕೊಂದು ಹಾಕಿದ. ಆಕೆಯ ಮೇಮೇಲೆ 15 ರಿಂದ 20 ಗಾಯದ ಗುರುತುಗಳಿವೆ.