ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕೆ ವ್ಯಕ್ತಿಯ ಹತ್ಯೆ

ಶನಿವಾರ, 26 ಡಿಸೆಂಬರ್ 2020 (09:25 IST)
ನವದೆಹಲಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಿದ್ದಕ್ಕೆ ಉತ್ತರ ಪ್ರದೇಶದಲ್ಲಿ 45 ವರ್ಷದ ವ್ಯಕ್ತಿಯನ್ನು ಹೊಡೆದು ಹತ್ಯೆ ಮಾಡಲಾಗಿದೆ.

 
ಗ್ರಾಮದ ಮುಖಂಡ ಮತ್ತು ಆತನ ಸಹಚರರು ಸೇರಿಕೊಂಡು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಗ್ರಾಮದ ಮುಖಂಡನ ನೇತೃತ್ವದಲ್ಲಿ ನಡೆಯುತ್ತಿದ್ದ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮೃತ ವ್ಯಕ್ತಿ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳಿಗೆ ದೂರು ನೀಡಿದ್ದ. ಇದಾದ ಕೆಲವೇ ಗಂಟೆಗಳಲ್ಲಿ ಆತನನ್ನು ಹೊಡೆದು ಹತ್ಯೆ ಮಾಡಲಾಗಿದೆ. ಪೊಲೀಸರೂ ಈ ಪ್ರಕರಣದ ಬಗ್ಗೆ ನಿರ್ಲ್ಷ್ಯಕ್ಷ ತಾಳಿದ್ದು, ಎಫ್ ಐಆರ್ ದಾಖಲಿಸಿಕೊಂಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ