ಮಂಡ್ಯದಲ್ಲಿ ರೈತ ಆತ್ಮಹತ್ಯೆ

ಬುಧವಾರ, 15 ಮಾರ್ಚ್ 2017 (20:17 IST)
ಮಂಡ್ಯದ ಟಿ. ಮಲ್ಲಿಗೆರೆ ಗ್ರಾಮದಲ್ಲಿ ಪ್ರಕಾಶ್ ಎಂಬ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತ ಪ್ರಕಾಶ್ ತನ್ನಲ್ಲಿದ್ದ ಒಂದು ಎಕರೆ ಜಮೀನಿನಲ್ಲಿ ಬೆಳೆಗಾಗಿ ಖಾಸಗಿ ಮತ್ತು ಸರ್ಕಾರಿ ಬ್ಯಾಂಕ್`ಗಳಲ್ಲಿ 5 ಲಕ್ಷ ರೂಪಾಯಿ ಸಾಲ ಮಾಡಿದ್ದನೆಂದು ತಿಳಿದುಬಂದಿದೆ.

ಇತ್ತೀಚೆಗೆ ಹೊಲದಲ್ಲಿ ಬೋರ್ ವೆಲ್ ಕೊರೆಸಿದ್ದ ರೈತ ನೀರು ಬಾರದೆ ಹತಾಶೆಗೊಂಡಿದ್ದ. ಇವತ್ತು ಬಜೆಟ್`ನಲ್ಲಿ ಸಾಲಮನ್ನಾ ಘೋಷಣೆಯಾಗುವ ನಿರೀಕ್ಷೆಯಲ್ಲಿದ್ದ ಎನ್ನಲಾಗಿದೆ. ಮಂಡ್ಯದ ಮಿಮ್ಸ್ ಆಸ್ಪತ್ರೆಗೆಯಲ್ಲಿ ಪ್ರಕಾಶ್ ಶವದ ಮರಣೋತ್ತರ ಪರೀಕ್ಷೆ ನಡೆಯಲಿದೆ.

ವೆಬ್ದುನಿಯಾವನ್ನು ಓದಿ