ಮಣಿಪುರ್ ಸಿಎಂ ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ

ಸೋಮವಾರ, 29 ಮೇ 2017 (13:28 IST)
2011 ರಲ್ಲಿ ನಡೆದ ಗಲಾಟೆ ಮತ್ತು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮುಖ್ಯಮಂತ್ರಿ ಬಿರೇನ್ ಸಿಂಗ್ ಪುತ್ರನಿಗೆ ಐದು ವರ್ಷಗಳ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ಕಳೆದ 2011ರಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಪುತ್ರ ಅಜಯ್ ಮಥಾಯ್‌ಗೆ ಕೋರ್ಟ್ ಐದು ವರ್ಷ ಶಿಕ್ಷೆ ಘೋಷಿಸಿ ತೀರ್ಪು ನೀಡಿದೆ.
 
ಹೈಕೋರ್ಟ್ ಇಂದು ಸಿಎಂ ಪುತ್ರ ಅಜಯ್ ಮಥಾಯ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಆಲಿಸಲು ಸಾವಿರಾರು ಜನರು ಕೋರ್ಟ್‌ಗೆ ಆಗಮಿಸಿದ್ದರು. ಕೆಲ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಗಿ ಬಂತು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ