ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮೀಸಲಾತಿ ಪರಿಷ್ಕರಣೆ ಕುರಿತಂತೆ ನೀಡಿದ ಹೇಳಿಕೆಯಿಂದ ಕಂಗಾಲಾಗಿರುವ ಬಿಜೆಪಿ ನಾಯಕರು, ದಲಿತರು, ಒಬಿಸಿ, ಇಬಿಸಿ ಸೇರಿದಂತೆ ಹಿಂದುಳಿದ ವರ್ಗಗಳ ಮನವೊಲಿಸಲು ಹರಸಾಹಸ ಪಡುತ್ತಿರುವಂತೆಯೇ ಹಿಂದುಸ್ತಾನ್ ಅವಾಮ್ ಮೋರ್ಚಾ ಹೇಳಿಕೆ ಮತ್ತಷ್ಟು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಹಿಂದುಸ್ತಾನ್ ಅವಾಮ್ ಮೋರ್ಚಾ ಪಕ್ಷದ ಮುಖ್ಯಸ್ಥ ಜಿತನ್ ರಾಮ್ ಮಾಂಜಿ, ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಲಾಗುವುದು ಎಂದು ನೀಡಿರುವ ಹೇಳಿಕೆ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕು. ಖಾಸಗಿ ಕ್ಷೇತ್ರದಲ್ಲಿ ಮೇಲ್ಜಾತಿಯವರ ಉದ್ಯೋಗಗಳನ್ನು ಕಸಿದುಕೊಳ್ಳುವ ಮೈತ್ರಿಕೂಟಕ್ಕೆ ಯಾವ ರೀತಿ ಬೆಂಬಲ ಸೂಚಿಸಬೇಕು ಎಂದು ರಾಜ್ಪೂತ್ ಸಮುದಾಯದ ರಾಹುಲ್ ಕುಮಾರ್ ಸಿಂಗ್ ಪ್ರಶ್ನಿಸಿದ್ದಾರೆ.