ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ಬಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಶುಕ್ರವಾರ, 11 ಅಕ್ಟೋಬರ್ 2019 (11:54 IST)
ಭೋಪಾಲ್ : ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ಹೋದ 20 ವರ್ಷದ ವಿವಾಹಿತೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಗುರುವಾರ ಮಧ್ಯರಾತ್ರಿ ನಡೆದಿದೆ.




ಧರ್ಮೇಂದ್ರ, ವಿಕ್ರಂ ಕರೋಸಿಯಾ, ರಾಜೇಶ್ ಖರೆ, ರಾಕೇಶ್ ಕರೋಸಿಯಾ ಅತ್ಯಾಚಾರ ಎಸಗಿದ ಆರೋಪಿಗಳು. ದುರ್ಗಾಮಾತೆ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಲು ಹೋಗಿದ್ದ ಮಹಿಳೆ ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ನಿರ್ಜನ ಪ್ರದೇಶಕ್ಕೆ ಹೋದಾಗ ನಾಲ್ವರು ವಿವಾಹಿತೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.

 

ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ನಾಲ್ವರು ನಿಲ್ದಾಣ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಖಾಸಗಿ ಏಜೆನ್ಸಿ ಮೂಲಕ ನೇಮಕವಾದ ನೌಕರರು ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ