ಕ್ರಿಶ್ಚಿಯನ್, ಸಿಖ್ ಮತ್ತು ಮುಸ್ಲಿಂ ಧರ್ಮಕ್ಕೆ ಸೇರಲು ಮತಾಂತರಗೊಂಡ ಎಸ್ಸಿ.ಎಸ್ಟಿ ಮತ್ತು ಒಬಿಸಿ ಸಮುದಾಯಗಳಿಗೂ ಕೇಂದ್ರ ಸರಕಾರ ಮೀಸಲಾತಿ ಘೋಷಿಸಬೇಕು ಎಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಬಿಎಸ್ಪಿ ಮುಖ್ಯಸ್ಥ ಮಾಯಾವತಿ ಒತ್ತಾಯಿಸಿದ್ದಾರೆ.
ಮೇಲ್ಜಾತಿಯ ಬಡವರಿಗಾಗಿ ಮೀಸಲಾತಿಯ ಪ್ರತ್ಯೇಕ ಕೋಟಾ ಮತ್ತು ಮುಸ್ಲಿಂ, ಕ್ರಿಶ್ಚಿಯನ್, ಬುಡಕಟ್ಟು ಮತ್ತು ಒಬಿಸಿ ಸಮುದಾಯಗಳು ಕೂಡಾ ಮೀಸಲಾತಿಗೆ ಅರ್ಹವಾಗಿವೆ. ಒಂದು ವೇಳೆ, ಎಸ್ಸಿ.ಎಸ್ಟಿ ಮತ್ತು ಒಬಿಸಿ ಸಮುದಾಯಗಳಿಗಿರುವ ಮೀಸಲಾತಿ ಬದಲಿಸುವ ಪ್ರಯತ್ನ ಮಾಡಿದಲ್ಲಿ ಕೇಂದ್ರ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಗುಡುಗಿದ್ದಾರೆ.