ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ದಲಿತ ವಿರೋಧಿ ಸರಕಾರವಾಗಿದ್ದು, ದಲಿತ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೆಮುಲಾ ಕುರಿತಂತೆ ಪ್ರಧಾನಿ ಮೋದಿಯವರ ಭಾವನಾತ್ಮಕ ಪ್ರತಿಕ್ರಿಯೆ ನಕಲಿಯಾಗಿದೆ ಎಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷದಂತೆ ಬಿಜೆಪಿ ಪಕ್ಷವು ದಲಿತ ವಿರೋಧಿ ಮಾನಸಿಕತೆಯನ್ನು ಹೊಂದಿದೆ. ಕೇಂದ್ರ ಸಚಿವ ವಿ.ಕೆ.ಸಿಂಗ್, ದಲಿತರನ್ನು ನಾಯಿಗಳು ಎಂದು ಜರಿದಿದ್ದರೂ ಮೋದಿ ಸರಕಾರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.