ಚಂದ್ರಬಾಬು ನಾಯ್ಡು ಪ್ರಮಾಣ ವಚನಕ್ಕೆ ಮೆಗಾಸ್ಟಾರ್ ಚಿರಂಜೀವಿ ಫ್ಯಾಮಿಲಿ ಗೆಸ್ಟ್

Krishnaveni K

ಬುಧವಾರ, 12 ಜೂನ್ 2024 (09:48 IST)
ಅಮರಾವತಿ: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಇಂದು ಚಂದ್ರಬಾಬು ನಾಯ್ಡು ಅಧಿಕಾರ ಸ್ವಿಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮೆಗಾಸ್ಟಾರ್ ಚಿರಂಜೀವಿ ಕುಟುಂಬ ಸಮೇತರಾಗಿ ಹಾಜರಾಗಲಿದ್ದಾರೆ.

ಇತ್ತೀಚೆಗೆ ನಡೆದಿದ್ದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿತ್ತು. ಇಂದು ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ಮಾಡಲಿದ್ದಾರೆ. ಅವರ ಜೊತೆಗೆ ಪವನ್ ಕಲ್ಯಾಣ್ ಕೂಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೀಗ ಆಂಧ್ರದಲ್ಲಿ ಚಂದ್ರಬಾಬು-ಪವನ್ ಕಲ್ಯಾಣ್ ಜುಗಲ್ ಬಂದಿ ನಡೆಯಲಿದೆ.

ವಿಜಯವಾಡದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸಮೇತರಾಗಿ ನಿನ್ನೆಯೇ ಆಗಮಿಸಿದ್ದಾರೆ. ಮೊನ್ನೆಯಷ್ಟೇ ಚುನಾವಣೆ ಗೆಲುವಿನ ಬೆನ್ನಲ್ಲೇ ಪವನ್ ಕಲ್ಯಾಣ್ ಅಣ್ಣ ಚಿರಂಜೀವಿ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದರು.

ಇದೀಗ ಚಿರಂಜೀವಿ, ಪತ್ನಿ, ಹಾಗೂ ಪುತ್ರ, ನಟ ರಾಮ್ ಚರಣ್ ಕೂಡಾ ಇಂದಿನ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ತಮ್ಮ ಪವನ್ ಇದೇ ಮೊದಲ ಬಾರಿಗೆ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ಚಿರಂಜೀವಿ ನೋಡಿ ಕಣ್ತುಂಬಿಕೊಳ್ಳಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ