ರಾಜ್ಯ ಸರ್ಕಾರ ಪತ್ರ ಬರೆದರೆ ಮೆಟ್ರೋ ದರ ಇಳಿಕೆ ಸಾಧ್ಯ: ಸಂಸದ ತೇಜಸ್ವಿ ಸೂರ್ಯ
ಮೆಟ್ರೋ ದರಗಳು ಏರಿಕೆಯಿಂದಾಗಿ ಮಧ್ಯಮ ವರ್ಗದ ಜನರಿಗೆ ತೊಂದರೆಯಾಗಿದೆ. ಏಕಾಏಕಿ ಮೆಟ್ರೋ ದರವನ್ನು 50%, 100% ಏರಿಕೆಯಾಗಿದೆ. ಸಂಬಳದ ದೊಡ್ಡ ಭಾಗ ಈಗ ಮೆಟ್ರೋಗೆ ಕೊಡಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಹೀಗಾಗಿ ರಾಜ್ಯ ಸರ್ಕಾರದಿಂದ ಸಿಎಂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಇದರಿಂದ ಮಾತ್ರ ದರ ಇಳಿಕೆ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.