ಬಿಸಿಲ ತಾಪಕ್ಕೆ ವೇದಿಕೆಯಲ್ಲಿ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

Sampriya

ಬುಧವಾರ, 24 ಏಪ್ರಿಲ್ 2024 (17:33 IST)
Photo Courtesy X
ಮಹಾರಾಷ್ಟ್ರ:  ಯವತ್ಮಾಲ್‌ನಲ್ಲಿ ಚುನಾವಣಾ ರ್ಯಾಲಿ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ಅದೃಷ್ಟವಶಾತ್, ಹಿರಿಯ ಬಿಜೆಪಿ ನಾಯಕನಿಗೆ ತುರ್ತು ಚಿಕಿತ್ಸೆ ನೀಡಲಾಯಿತು.  ಸ್ವಲ್ಪ ವಿರಾಮದ ನಂತರ ನಿತಿನ್ ಅವರು ಸುಧಾರಿಸಿಕೊಂಡು ಭಾಷಣವನ್ನು ಮುಂದುವರೆಸಿದ್ದಾರೆ.  

ಇನ್ನೂ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, "ಮಹಾರಾಷ್ಟ್ರದ ಪುಸಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಬಿಸಿಲಿನ ತಾಪದಿಂದ ನನಗೆ ಅನಾನುಕೂಲವಾಗಿದೆ. ಆದರೆ ಈಗ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಮತ್ತು ಮುಂದಿನ ಸಭೆಗೆ ಹಾಜರಾಗಲು ವರುದ್‌ಗೆ ಹೋಗುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು." ಎಂದಿದ್ದಾರೆ.

ಇನ್ನೂ ಗಡ್ಕರಿ ಅವರು ಕುಸಿದು ಬೀಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ