ಇದನ್ನು ಪವಾಡ ಎನ್ನುತ್ತಿರೋ, ಆತ್ಮಸ್ಥೈರ್ಯವೆನ್ನುತ್ತೀರೋ? ನಿಮಗೆ ಬಿಟ್ಟಿದ್ದು. ಸಿಯಾಚಿನ್ನ ನಿರ್ಗಲ್ಲು ಪ್ರದೇಶದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಲಾಗಿದ್ದ ಕರ್ನಾಟಕದ ಯೋಧ, ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ ಸೋಮವಾರ ರಾತ್ರಿ ಜೀವಂತವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಪ್ರಕಟನೆ ಹೊರಡಿಸಿದೆ.
ಅಸ್ವಸ್ಥ ಸ್ಥಿತಿಯಲ್ಲಿರುವ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸತತ ಆರು ದಿನಗಳ ಕಾಲ 25 ಅಡಿ ಆಳದಲ್ಲಿ -45 ಡಿಗ್ರಿ ಸೆಲ್ಸಿಯಸ್ ವಾತಾವರಣದಲ್ಲಿದ್ದರಿಂದ ದೇಹ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ನವದೆಹಲಿಯ ಆರ್. ಆರ್. ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.