ಬಿಜೆಪಿ ಅಭ್ಯರ್ಥಿ ಸುನೀಲ್ಕುಮಾರ್ ಪರವಾಗಿ ಚುನಾವಣೆ ಪ್ರಚಾರಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ವಿಳಂಬವಾಗಿ ಆಗಮಿಸಿದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಸೇರಿದಂತೆ 12 ಮಂದಿ ಗಾಯಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ್ ಕುಮಾರ್ ಮಾತನಾಡಿ, ಇಂದು ಬೆಳಿಗ್ಗೆ 10.30 ಗಂಟೆಗೆ ನಟ ಅಜಯ್ ದೇವಗನ್ ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಆಗಮಿಸುವವರಿದ್ದರು. ಆದರೆ, ಕೊನೆಗೂ 1 ಗಂಟೆಗೆ ದೇವಗನ್ ಆಗಮಿಸಿದ್ದರೂ ರೊಚ್ಚಿಗೆದ್ದ ಸಾವಿರಾರು ಜನರು ತಾಳ್ಮೆ ಕಳೆದುಕೊಂಡು ಹಿಂಸಾಚಾರ ನಡೆಸಿದರು ಎಂದು ತಿಳಿಸಿದ್ದಾರೆ.