ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಮಾಧ್ಯಮದವರಿಗಾಗಿ ದೀಪಾವಳಿ ಮಿಲನ ಸಮಾರಂಭ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಪೆನ್ನ್ನು ಪೊರಕೆಯಾಗಿ ಪರಿವರ್ತಿಸಿದಿರಿ ನಿಮಗೆ ಧನ್ಯವಾದಗಳು. ಮಾಧ್ಯಮದವರ ಜತೆಗಿನ ಸಂಬಂಧಗಳನ್ನು ಮತ್ತಷ್ಟು ಗಾಢವಾಗಿಸಲು ತಾವು ಪ್ರಯತ್ನಿಸುತ್ತಿರುವುದಾಗಿ ಹೇಳಿದ್ದಾರೆ.
ಸ್ವಚ್ಛ ಭಾರತ ಅಭಿಯಾನದ ಕುರಿತು ಮಾತನಾಡಿದ ಮೋದಿ, "ಕಳೆದೊಂದು ತಿಂಗಳಿಂದ ಸ್ವಚ್ಛತೆಯ ಕುರಿತಾಗಿ ಪತ್ರಿಕೆಗಳಲ್ಲಿ ಪ್ರಕಟವಾದ ಅನೇಕ ಲೇಖನಗಳನ್ನು ನೋಡಿದ್ದೇನೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಈ ಕುರಿತು ಬಹಳ ಚರ್ಚೆಗಳು ನಡೆಯುತ್ತಿವೆ. ಕ್ಲೀನ್ ಇಂಡಿಯಾ ಅಭಿಯಾನಕ್ಕೆ ಬೆಂಬಲ ನೀಡಿದ ಮಾಧ್ಯಮದವರಿಗೆ ನಾನು ಧನ್ಯವಾದಗಳನ್ನು ಹೇಳ ಬಯಸುತ್ತೇನೆ. ನೀವು ಪೆನ್ನ್ನು ಪೊರಕೆಯಾಗಿ ಪರಿವರ್ತಿಸಿದಿರಿ" ಎಂದು ಹೇಳಿದರು.