ಹೌದು, ಕೆಲ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ಇಂದು ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರು. ಈ ವೇಲೆ ಸಿಎಂ ನಿತೀಶ್ ಕುಮಾರ್ ಕೂಡ ಆಗಮಿಸಿ ವೇದಿಕೆ ಹಂಚಿಕೊಂಡಿದ್ದಾರೆ. ಅಲ್ಲದೆ ಅಭಿವೃದ್ಧಿಗಾಗಿ ಜೊತೆಯಲ್ಲಿಯೇ ವೇದಿಕೆ ಹಂಚಿಕೊಂಡಿದ್ದಾರೆ.
ರಾಜಕೀಯ ತಜ್ಞರ ಪ್ರಕಾರ, ಬಿಹಾರ ವಿಧಾನಸಭಾ ಚುನಾವಣೆಯು ಹತ್ತಿರ ಸುಳಿಯುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಈ ಪ್ರಯತ್ನಗಳನ್ನು ನಡೆಸುತ್ತಿದ್ದು, ಪಕ್ಷದ ಬಲವರ್ಧನೆಗೆ ಈ ರೀತಿಯ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಈ ರಾಜ್ಯ ಪ್ರವಾಸದಲ್ಲಿ ಐಐಟಿ ಕ್ಯಾಂಪಸ್, ದೀನ ದಯಾಳ್ ಗ್ರಾಮ ವಿದ್ಯುತ್ ಜ್ಯೋತಿ ಯೋಜನೆ, ಜಗದೀಶ್ಪುರ-ಹಾಲ್ಡಿಯಾ ಮಾರ್ಗದ ಗ್ಯಾಸ್ ಪೈಪ್ ಲೈನ್ ಹಾಗೂ ನೀತನ ರೈಲು ಮಾರ್ಗಗಳಿಗೆ ಚಾಲನೆ ನೀಡಲಿದ್ದಾರೆ. ಇನ್ನು ಕೇಂದ್ರವು ವಿದ್ಯುತ್ ಯೋಜನೆಗೆ 76 ಸಾವಿರ ಕೋಟಿ ಹಾಗೂ ಗ್ಯಾಸ್ ಪೈಪ್ ಲೈನ್ ಯೋಜನೆಗೆ 10 ಸಾವಿರ ಕೋಟಿ ವ್ಯಯಿಸುತ್ತಿದೆ.