ಉತ್ತರಪ್ರದೇಶದ ರಾಯಬರೇಲಿಯಲ್ಲಿ ಆಯೋಜಿಸಲಾಗಿದ್ದ ರೈತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದೆ. ಕೇಂದ್ರ ಸರಕಾರ ನಿಗದಿಪಡಿಸಿದ್ದ ಗ್ರಾಮೀಣ ಉದ್ಯೋಗ ಖಾತರಿ ಅನುದಾನವನ್ನೂ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದರು.
ಮುಂಬರುವ 2022ರ ವೇಳೆಗೆ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಸಂದರ್ಭದಲ್ಲಿ, ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎಂದು ಕೇಂದ್ರ ಸರಕಾರ ಬಯಸಿದೆ. ಸರಕಾರ ಕಾರ್ಪೋರೇಟ್ ಪರವಾಗಿದೆ ಎನ್ನುವ ವಿಪಕ್ಷಗಳ ಆರೋಪವನ್ನು ತಳ್ಳಿಹಾಕಿದರು.