ಕಾಂಗ್ರೆಸ್ ಪಕ್ಷದ ಗರೀಬಿ ಹಟಾವೋ ಘೋಷಣೆಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದವರ ಘೋಷಣೆ ಸರಿಯಾಗಿದೆ. ಆದರೆ, ಘೋಷಣೆಯನ್ನು ಜಾರಿಗೆ ತರುವಲ್ಲಿ ಆಯ್ಕೆ ಮಾಡಿದ ದಾರಿ ತಪ್ಪಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಕೇಂದ್ರ ಸರಕಾರ ಎರಡು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ, ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮೋದಿ, ಈಶಾನ್ಯ ರಾಜ್ಯಗಳಲ್ಲಿ ಸಂಪನ್ಮೂಲಗಳು ಶ್ರೀಮಂತವಾಗಿದ್ದರೂ ಯಾಕೆ ರಾಜ್ಯಗಳು ಹಿಂದುಳಿದಿವೆ ಎಂದು ಪ್ರಶ್ನಿಸಿದರು.
ಓರಿಸ್ಸಾ, ಪೂರ್ವ ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ್ ಮತ್ತು ಆಸ್ಸಾಂ ರಾಜ್ಯಗಳ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಬಡವರ ಯೋಗಕ್ಷೇಮಕ್ಕೆ ಅಗತ್ಯವಾಗಿರುವ ಯೋಜನೆಗಳನ್ನು ಜಾರಿಗೆ ತರಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.