ದೆಹಲಿಯಲ್ಲಿ ಬಿಜೆಪಿ ಸಂಸದರ ಕಾರ್ಯಾಗಾರ ನಡೆಯುತ್ತಿದ್ದು, ಎಲ್ಲಾ ಸಂಸದರು ಭಾಗವಹಿಸಿದ್ದಾರೆ. ಬಿಜೆಪಿ ಸಂಸದರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕಾರ್ಯಾಗಾರದಲ್ಲಿ ಬಿಜೆಪಿ ಹಿರಿಯ ಮುಖಂಡರು, ಎಲ್ಲಾ ಸಂಸದರು ಭಾಗವಹಿಸಿದ್ದರು. ನನ್ನ ಮೇಲೆ ನಂಬಿಕೆ ಇಟ್ಟಿರುವ ಜನರಿಗೆ ಧನ್ಯವಾದ ಎಂದು ಪ್ರಧಾನಿ ಮೋದಿ ಹೇಳಿದರು.
ಸುಷ್ಮಾಸ್ವರಾಜ್, ವೆಂಕಯ್ಯ ನಾಯ್ಡು, ಗೆಹ್ಲೋಟ್ ಸೇರಿದಂತೆ ಅನೇಕ ಹಿರಿಯ ಮುಖಂಡರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಮಾರೋಪ ಭಾಷಣ ಮಾಡಲಿದ್ದಾರೆ.