ಸರ್ಕಾರದ ಮೇಲೆ ನಂಬಿಕೆ ಇಟ್ಟಿರುವ ಜನರಿಗೆ ಮೋದಿ ಧನ್ಯವಾದ

ಭಾನುವಾರ, 19 ಏಪ್ರಿಲ್ 2015 (10:59 IST)
ದೆಹಲಿಯಲ್ಲಿ ಬಿಜೆಪಿ ಸಂಸದರ ಕಾರ್ಯಾಗಾರ ನಡೆಯುತ್ತಿದ್ದು, ಎಲ್ಲಾ ಸಂಸದರು ಭಾಗವಹಿಸಿದ್ದಾರೆ. ಬಿಜೆಪಿ ಸಂಸದರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕಾರ್ಯಾಗಾರದಲ್ಲಿ ಬಿಜೆಪಿ ಹಿರಿಯ ಮುಖಂಡರು, ಎಲ್ಲಾ ಸಂಸದರು ಭಾಗವಹಿಸಿದ್ದರು. ನನ್ನ ಮೇಲೆ ನಂಬಿಕೆ ಇಟ್ಟಿರುವ ಜನರಿಗೆ ಧನ್ಯವಾದ ಎಂದು ಪ್ರಧಾನಿ ಮೋದಿ ಹೇಳಿದರು.

ಯೆಮನ್‌ನಲ್ಲಿ ಭಾರತೀಯರ ರಕ್ಷಣೆ ಯಶಸ್ವಿಯಾಗಿದೆ ಎಂದು ಹೇಳಿದ ಮೋದಿ ಕೇಂದ್ರ ಸಚಿವ ವಿ.ಕೆ. ಸಿಂಗ್ ಕಾರ್ಯವನ್ನು ಶ್ಲಾಘಿಸಿದರು. ಸರ್ಕಾರದ ಬಡವರ ಪರ ಉಪಕ್ರಮಗಳನ್ನು ಜನರಿಗೆ ಮುಟ್ಟಿಸುವುದು ಹೇಗೆ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಭೂಸ್ವಾಧೀನ ಕಾಯ್ದೆ ಕುರಿತಂತೆ ಕಾಂಗ್ರೆಸ್ ದಾಳಿಯನ್ನು ಎದುರಿಸುವುದು ಹೇಗೆ ಎನ್ನುವ ಬಗ್ಗೆ ಸಂಸದರಿಗೆ ಮೋದಿ ಮನದಟ್ಟು ಮಾಡಿದರು.

ಸುಷ್ಮಾಸ್ವರಾಜ್, ವೆಂಕಯ್ಯ ನಾಯ್ಡು, ಗೆಹ್ಲೋಟ್ ಸೇರಿದಂತೆ ಅನೇಕ ಹಿರಿಯ ಮುಖಂಡರು  ಕಾರ್ಯಾಗಾರದಲ್ಲಿ ಭಾಗವಹಿಸಿದ್ದು,  ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಮಾರೋಪ ಭಾಷಣ ಮಾಡಲಿದ್ದಾರೆ. 
 

ವೆಬ್ದುನಿಯಾವನ್ನು ಓದಿ