ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸದ ಬಾಲಕಿಯ ತಂದೆ, "ನಮಗೆ ನ್ಯಾಯ ಬೇಕು. ಬಸ್ ಉಪ ಮುಖ್ಯಮಂತ್ರಿ ಸುಖ್ ಬೀರ್ ಸಿಂಗ್ ಬಾದಲ್ ಅವರದ್ದಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ತಮ್ಮ ಮಗಳ ಅಂತಿಮ ಸಂಸ್ಕಾರ ನಡೆಸುವುದಿಲ್ಲ. ಆರ್ಬಿಟ್ ಅವಿಯೇಷನ್ ಬಸ್ ಪರವಾನಿಗೆಗಳನ್ನು ರದ್ದು ಪಡಿಸಬೇಕು. 50 ಲಕ್ಷ ಪರಿಹಾರ ಧನ ನೀಡಬೇಕು. ಜತೆಗೆ ತಮ್ಮ ಕುಟುಂಬದ ಒಬ್ಬ ಸದಸ್ಯರಿಗೆ ಸರಕಾರಿ ನೌಕರಿ ಕೊಡಿಸಬೇಕು ಎಂದು ಹಠ ಹಿಡಿದಿದ್ದಾರೆ. ಬಾಲಕಿಯ ಮರಣೋತ್ತರ ಪರೀಕ್ಷೆಗೆ ಸಹ ಕುಟುಂಬದವರು ಅನುಮತಿ ನೀಡಿರಲಿಲ್ಲ.
ಘಟನೆಯ ಕುರಿತು ಮಾತನಾಡಿರುವ ಬಸ್ ಸಂಸ್ಥೆಯ ಮಾಲೀಕ ಮತ್ತು ಪಂಜಾಬ್ ಉಪ ಮುಖ್ಯಮಂತ್ರಿ ಸುಖ್ ಬೀರ್ ಸಿಂಗ್ ಬಾದಲ್, "ಈ ಘಟನೆ ನನಗೆ ಆಘಾತವನ್ನುಂಟು ಮಾಡಿದೆ. ಬಾಲಕಿಯ ಸಾವಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ'', ಎಂದು ಭರವಸೆ ನೀಡಿದ್ದಾರೆ.
ಘಟನೆ ನಡೆದು 15 ತಾಸುಗಳ ನಂತರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಅವರ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ), 307 (ಕೊಲೆ ಯತ್ನ), 354 (ಮಹಿಳಾ ದೌರ್ಜನ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.