ಮೋರ್ಬಿ ಸೇತುವೆ ದುರಂತ : ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಾಂತ್ವನ

ಬುಧವಾರ, 2 ನವೆಂಬರ್ 2022 (07:41 IST)
ಗಾಂಧಿನಗರ : ಮೋರ್ಬಿ ತೂಗುಸೇತುವೆ ದುರಂತ ಸಂಬಂಧ ರಕ್ಷಣಾ ಕಾರ್ಯಾಚರಣೆ ಬಹುತೇಕ ಅಂತ್ಯಗೊಂಡಿದೆ.

 
ನಾಳೆ ಗುಜರಾತ್ನಲ್ಲಿ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಈ ಮಧ್ಯೆ, ಇವತ್ತು ಮೋರ್ಬಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. 

ಎಸ್ಪಿ ಕಚೇರಿಯಲ್ಲಿ ಸಿಎಂ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮೋದಿ ಆಗಮನ ಕಾರಣ ನಿನ್ನೆ ರಾತ್ರಿ ತರಾತುರಿಯಲ್ಲಿ ಮೋರ್ಬಿ ಸರ್ಕಾರಿ ಆಸ್ಪತ್ರೆಗೆ ಸುಣ್ಣ-ಬಣ್ಣ ಬಳಿದಿದ್ದು, ವಿಪಕ್ಷಗಳಿಗೆ ಆಹಾರವಾಗಿದೆ.

ದುರಂತಕ್ಕೆ ಕಾರಣರಾದವರ ವಿರುದ್ಧ ಈವರೆಗೂ ಯಾವುದೇ ಕ್ರಮ ಇಲ್ಲ. ಆದ್ರೆ ಫೋಟೋಶೂಟ್ಗಾಗಿ ಹೇಗೆಲ್ಲಾ ಮಾಡ್ತಿದ್ದಾರೆ ಎಂದು ಎಎಪಿ ಕಿಡಿಕಾರಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ