ಇಂದು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುವ ಮುನ್ನವೆ ಬಿಜೆಪಿ ಮುಖಂಡರೊಬ್ಬರು, ವ್ಯಾಪಂ ಹಗರಣ ಕುರಿತಂತೆ ಪಕ್ಷ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಂದಕುಮಾರ್ ಸಿಂಗ್ ಚೌಹಾನ್ ಅವರಿಗೆ ಪತ್ರ ಬರೆದಿರುವುದಾಗಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.
ಮಧ್ಯಪ್ರದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ದಲಿತರ ಓಟ್ಬ್ಯಾಂಕ್ ಪ್ರಮುಖ ಕಾರಣವಾಗಿದೆ. ಆದರೆ, ಬಿಜೆಪಿ ಸರಕಾರದಲ್ಲಿಯೇ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿರುವುದು ದಲಿತ ಸಮುದಾಯಕ್ಕೆ ಕಳವಳ ಮೂಡಿಸಿದೆ. ದಲಿತರ ಬಗ್ಗೆ ಬಿಜೆಪಿ ತೋರಿಸುತ್ತಿರುವ ಕಾಳಜಿ ನಾಟಕೀಯವೆನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.