ತಮ್ಮ ಸಂಸ್ಕೃತಿ ಪ್ರದರ್ಶನ, ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮತ್ತು ತಮ್ಮ ಹಕ್ಕುಗಳ ರಕ್ಷಣೆ ಖಚಿತಪಡಿಸಿಕೊಳ್ಳಲು ಬುಡಕಟ್ಟು ಜನಾಂಗದವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಧ್ಯಪ್ರದೇಶದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ಸಂರಕ್ಷಣಾ ಸಚಿವ, ವಿಜಯ್ ಶಾ, ಗುಡ್ಡಗಾಡು ಜನಾಂಗದವರ ಸಂಸ್ಕೃತಿಯಂತೆ ಕಾಲು ಮಿಲಾಯಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾ, ಶ್ರೀಮಂತ ಗೊಂಡ ಇತಿಹಾಸ ಮತ್ತು ಸಂಸ್ಕೃತಿ ನೋಡಲು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಆಹ್ವಾನಿಸುತ್ತೇವೆ ಎಂದರಲ್ಲದೇ, ಆದಷ್ಟು ಬೇಗ ಟ್ರೈಬಲ್ ಚಾನೆಲ್ ಪ್ರಾರಂಭಿಸುವುದಾಗಿ ಭರವಸೆ ನೀಡಿದರು.