ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿದ್ಧಾರ್ಥನಾಥ್ ಸಿಂಗ್ ಮಾತನಾಡಿ, ಸಮಾಜವಾದಿ ಪಕ್ಷದ ಕೆಲ ಮುಖಂಡರು ಭೂಕಬಳಿಕೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ರಾಜೀನಾಮೆ ನೀಡುವುದಾಗಿ ಮುಲಾಯಂ ಸಹೋದರ ಶಿವಪಾಲ್ ಯಾದವ್ ಬೆದರಿಕೆಯೊಡ್ಡಿರುವುದು ಸರಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, 2012ರಲ್ಲಿ ಪುತ್ರ ಅಖಿಲೇಶ್ ಯಾದವ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು ಐದು ಬಾರಿ ಸಾರ್ವಜನಿಕವಾಗಿ ತಮ್ಮ ಅತೃಪ್ತಿಯನ್ನು ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.ಇದೊಂದು ವಿಫಲ ಸರಕಾರ ಎಂದು ಯಾದವ್ ಕಿಡಿಕಾರಿದ್ದರು.