ಭಾರತದಲ್ಲಿ ಮುಸ್ಲಿಮರ ಸ್ಥಿತಿ ಶೋಚನೀಯ: ಅಜಮ್ ಖಾನ್

ಬುಧವಾರ, 27 ಆಗಸ್ಟ್ 2014 (16:46 IST)
ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸದಾ ಸುದ್ದಿಯಲ್ಲಿರುವ ಉತ್ತರಪ್ರದೇಶದ ಸಮಾಜವಾದಿ ನಾಯಕ  ಅಜಮ್ ಖಾನ್  ಭಾರತದಾದ್ಯಂತ ಇರುವ ಮುಸ್ಲಿಂಮರು ತುಂಬ ಶೋಚನೀಯ ಬದುಕನ್ನು ಎದುರಿಸುತ್ತಿದ್ದಾರೆ ಎಂದು ಹೇಳುವುದರ ಮೂಲಕ ಹೊಸದೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. 

ಮಾಧ್ಯಮಗಳ ಜತೆ ಮಾತನಾಡುತ್ತಿದ್ದ ಅವರು ನರೇಂದ್ರ ಮೋದಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತ ದೇಶವನ್ನು ಆಳುತ್ತಿರುವವರು ಮುಸ್ಲಿಂ ಮತೀಯರ ಅಭಿವೃದ್ಧಿಯನ್ನು ಬಯಸುವುದಿಲ್ಲ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. 
 
ಮಾತಿನ ಮಧ್ಯೆ  ಬಿಹಾರದ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು,  ಕಳೆದ ಲೋಕಸಭಾ ಚುನಾವಣೆಯ ಪ್ರಚಾರ ಮೆರವಣಿಗೆಯಲ್ಲಿ ಹೇಳಿದ್ದ ಮಾತುಗಳನ್ನು ಅವರು ಉಲ್ಲೇಖಿಸಿದರು. ನರೇಂದ್ರ ಮೋದಿಯನ್ನು ವಿರೋಧಿಸುವ  ಮುಸ್ಲಿಂಮರು  ಪಾಕಿಸ್ತಾನಕ್ಕೆ ಹೋಗಬೇಕೆಂದು ಬಿಜೆಪಿ ನಾಯಕರು ಹೇಳಿದ್ದರು. ಆದರೆ  ಅವರು ಹೇಗೆ ಹೋಗಬೇಕೆಂದು ಸರಕಾರ ಸ್ಪಷ್ಟಪಡಿಸಿಲ್ಲ ಎಂದು ಖಾನ್ ಆಕ್ರೋಶ ಹೊರಹಾಕಿದ್ದಾರೆ. 

ವೆಬ್ದುನಿಯಾವನ್ನು ಓದಿ