ಮಹದಾಯಿ ವಿವಾದ ಬಗೆಹರಿಸಲು ಮೋದಿ ಸೂತ್ರ

ಶನಿವಾರ, 5 ಆಗಸ್ಟ್ 2017 (18:07 IST)
ಕರ್ನಾಟಕದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಾದಿತ ಮಹದಾಯಿ ಯೋಜನೆಗೆ ಪರಿಹಾರ ಕಂಡು ಹಿಡಿಯಲು ಬಿಜೆಪಿ ಮುಂದಾಗಿದೆ ಎಂಬ ವರದಿಗಳು ಕೇಳಿ ಬರುತ್ತಿವೆ.
 

ಸ್ವತಃ ನರೇಂದ್ರ ಮೋದಿ ಈ ಬಗ್ಗೆ ಆಸಕ್ತಿ ತೋರಿಸಿದ್ದು, ವಿವಾದ ಬಗೆಹರಿಸಿಕೊಳ್ಳಲು ಮನೋಹರ್ ಪರಿಕ್ಕರ್ ಅವರಿಗೂ ಸೂಚಿಸಿದ್ದಾರೆ ಎನ್ನಲಾಗಿದೆ. ಮೊನ್ನೆ ನಡೆದ ಸಂಸದರ ಸಭೆಯಲ್ಲಿ ಈ ಬಗ್ಗೆ ಸೂಚನೆ ನೀಡಿರುವ ನರೇಂದ್ರ ಮೋದಿ, ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆ ನಡೆಸುವಂತೆ ರಾಜ್ಯ ನಾಯಕರಿಗೆ ತಿಳಿಸಿದ್ದಾರಂತೆ.

ಈ ವರದಿ ಇಂಬು ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಹ ಸಂಸದರನ್ನ ಕರೆದೊಯ್ದು ಗೋವಾ ಸರ್ಕಾರದ ಜೊತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹಾಗೇನಾದರೂ ಆದಲ್ಲಿ ವರ್ಷಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಸಿಹಿ ಸುದ್ದಿ ಸಿಗಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ