ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 68ನೇ ಪುಣ್ಯತಿಥಿ ಆಚರಣೆ

ಶನಿವಾರ, 30 ಜನವರಿ 2016 (14:18 IST)
ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 68ನೇ ಪುಣ್ಯತಿಥಿ ಸಂದರ್ಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಶೃದ್ಧಾಂಜಲಿ ಸಲ್ಲಿಸಿದ್ದಾರೆ.
 
ರಾಜಘಾಟ್‌ಗೆ ಭೇಟಿ ನೀಡಿದ ಮುಖರ್ಜಿ, ಮೋದಿ ಮತ್ತು ಹಮೀದ್ ಅನ್ಸಾರಿ ಮಹಾತ್ಮಾ ಸಮಾಧಿಗೆ ಹೂಗುಚ್ಚಗಳನ್ನು ಅರ್ಪಿಸಿದರು. ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್, ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು ಕೂಡಾ ರಾಷ್ಟ್ರಪಿತಾಗೆ ಶೃದ್ಧಾಂಜಲಿ ಅರ್ಪಿಸಿದರು.  
 
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕ ಗುಲಾಮ್ ನಬಿ ಆಜಾದ್, ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಕೂಡಾ ರಾಷ್ಟ್ರಪಿತನಿಗೆ ನಮನ ಸಲ್ಲಿಸಿದರು. 
 
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ರಾಜಘಾಟ್‌ಗೆ ಭೇಟಿ ನೀಡಿದರು ಎಂದು ಮೂಲಗಳು ತಿಳಿಸಿವೆ.
 
ಮಹಾತ್ಮಾ ಗಾಂಧಿಯವರ ಪುಣ್ಯತಿಥಿ ಅಂಗವಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಎಲ್ಲಾ ಸಮಸ್ಯೆಗಳಿಗೆ ಗಾಂಧಿ ತತ್ವವೇ ಪರಿಹಾರ ಎನ್ನುವ ಸಂದೇಶ ಪೋಸ್ಟ್ ಮಾಡಿದ್ದಾರೆ.
 

ವೆಬ್ದುನಿಯಾವನ್ನು ಓದಿ