ದೇಶಕ್ಕೇ ಬೆಂಕಿ ಬಿದ್ದಿದೆ: ರಾಹಲ್ ಗಾಂಧಿ
ಪದ್ಮಾವತ್ ಸಿನಿಮಾ ಇಂದು ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ರಜಪೂತ ವೀರ ಮಹಿಳೆ ಪದ್ಮಾವತಿಯನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಕೆಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಲೇ ಇವೆ. ಇವೆಲ್ಲದರ ಮಧ್ಯೆ ಇಂದು ಚಿತ್ರ ಬಿಡುಗಡೆಯಾಗಿದೆ. ಇದನ್ನು ವಿರೋಧಿಸಿ ನಿನ್ನೆ ಪ್ರತಿಭಟನಾಕಾರರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಗುರ್ ಗಾಂವ್ ನಲ್ಲಿ ಕಿಡಿಗೇಡಿಗಳು ಶಾಲಾ ಮಕ್ಕಳಿದ್ದ ಬಸ್ ಗೆ ಬೆಂಕಿ ಹಚ್ಚಿದ ವಿಡಿಯೋ ಭಾರೀ ವೈರಲ್ ಆಗಿತ್ತು.