ತಮ್ಮ ನಿವಾಸದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಜಾಬ್ ರಾಜ್ಯದಿಂದ ದೂರವಿರಲು ಹೈಕಮಾಂಡ್ ಕಟ್ಟಪ್ಪಣೆ ವಿಧಿಸಲಾಗಿತ್ತು. ಆದರೆ, ಅದು ಸಾಧ್ಯವಿಲ್ಲವಾದ್ದರಿಂದ ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂತು ಎಂದು ತಿಳಿಸಿದ್ದಾರೆ.
ಆದರೆ, ಆಮ್ ಆದ್ಮಿ ಪಕ್ಷವನ್ನು ಸೇರುವ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಡಲು ನಿರಾಕರಿಸಿದರು.ಆದರೆ, ಪಂಜಾಬ್ ರಾಜ್ಯದ ಹಿತಾಸಕ್ತಿ ಅವಶ್ಯವಿದ್ದಲ್ಲಿ ನಾನಿರುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು.
ಕಳೆದ 2004 ರಿಂದ 2014 ರವರೆಗೆ ಅಮೃತ್ಸರ್ದಿಂದ ನಿರಂತರವಾಗಿ ಸಂಸದರಾಗಿ ಆಯ್ಕೆಯಾಗಿ ಬಂದಿದ್ದ ಸಿದ್ದು ಅವರನ್ನು 2014ರಲ್ಲಿ ಲೋಕಸಭೆಯ ಸೀಟನ್ನು ಅರುಣ್ ಜೇಟ್ಲಿಗೆ ಬಿಟ್ಟುಕೊಡುವಂತೆ ಬಿಜೆಪಿ ಹೈಕಮಾಂಡ್ ಆದೇಶಿಸಿತು. ಅದರೆ, ಜೇಟ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಜೇಟ್ಲಿ ಸೋಲನುಭವಿಸಬೇಕಾಯಿತು.