ಪುಲ್ವಾಮಾ ದಾಳಿ: ಪಾಕ್ ಪರ ಮಾತನಾಡಿದ್ದಕ್ಕೆ ನವಜೋತ್ ಸಿಂಗ್ ಸಿದು ವಿರುದ್ಧ ಆಕ್ರೋಶ
‘ಪುಲ್ವಾಮ ದಾಳಿ ಖಂಡನೀಯ. ಆದರೆ ಕೆಲವೇ ಕೆಲವು ಕೆಟ್ಟ ವ್ಯಕ್ತಿಗಳ ಕುಕೃತ್ಯಕ್ಕೆ ಇಡೀ ದೇಶವನ್ನು ದೂಷಿಸುವುದು ಸರಿಯಲ್ಲ’ ಎಂದು ಸಿದು ಹೇಳಿದ್ದರು. ಇದಕ್ಕೂ ಮೊದಲು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪದಗ್ರಹಣ ಸಮಾರಂಭಕ್ಕೆ ಹೋಗಿ ಪಾಕ್ ಸೇನಾ ನಾಯಕನನ್ನು ಸಿದು ಅಪ್ಪಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ಪಾಕ್ ಪರವಾಗಿ ಮಾತನಾಡಿದ ವಿವಾದಕ್ಕೀಡಾಗಿದ್ದಾರೆ.