ಕಲಾಪ ನಡೆಯದೇ ಇರುವಾಗ ವೇತನವೂ ಬೇಡ ಎಂದ ಎನ್ ಡಿಎ ಸಂಸದರು!
ಎನ್ ಡಿಎ ಸಂಸದರ ಈ ನಿರ್ಧಾರ ಪ್ರತಿಪಕ್ಷ ಕಾಂಗ್ರೆಸ್ ಗೆ ಮುಜುಗರ ಉಂಟುಮಾಡಲಿದೆ. ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಬಿಜೆಪಿಯ ಇತರ ಮೈತ್ರಿ ಪಕ್ಷಗಳೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅನಂತ ಕುಮಾರ್ ಹೇಳಿದ್ದಾರೆ.
ಸಂಸತ್ ನಲ್ಲಿ 20 ದಿನ ಕಲಾಪ ನಡೆಸಲು ಸಾಧ್ಯವಾಗಲಿಲ್ಲ. 11 ಬಾರಿ ಕಲಾಪ ಮುಂದೂಡಲಾಗಿತ್ತು. ಈ ಸಂದರ್ಭದಲ್ಲಿ ನಡೆದ ಕಲಾಪದ ನೆಪದಲ್ಲಿ ವೃಥಾ ಜನರ ಹಣವನ್ನು ವೇತನ ರೂಪದಲ್ಲಿ ಪಡೆಯುವ ಹಕ್ಕು ನಮಗಿಲ್ಲ ಎಂದು ಅನಂತ ಕುಮಾರ್ ಹೇಳಿಕೊಂಡಿದ್ದಾರೆ.