ತಾನು 2013ರಲ್ಲಿ ಜೈಲುವಾಸವನ್ನು ಅನುಭವಿಸುತ್ತಿದ್ದಾಗ ತಮ್ಮ ತಾಯಿಗೆ ದೂರವಾಣಿ ಕರೆ ಮಾಡಿದ್ದ ಸಿಎಂ ಹಗರಣದ ಮಾಹಿತಿ ಬಹಿರಂಗ ಪಡಿಸದಂತೆ ಒತ್ತಡ ಹೇರಿದ್ದರು ಎಂದು ಸರಿತಾ ಗಂಭೀರವಾಗಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಹಗರಣದಲ್ಲಿ ಅನೇಕ ಪ್ರಭಾವಿ ವ್ಯಕ್ತಿಗಳು ಶಾಮೀಲಾಗಿದ್ದಾರೆ. ಇದನ್ನು ಸಾಬೀತು ಪಡಿಸಲು ಪ್ರಬಲ ಸಾಕ್ಷ್ಯಗಳು ತಮ್ಮ ಬಳಿ ಇವೆ ಎಂದು ಅವರು ಘೋಷಿಸಿದ್ದಾರೆ.