ಸಂಪೂರ್ಣ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಡಿಸೆಂಬರ್ 16, 2012ರಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಹತ್ಯೆ ಪ್ರಕರಣದ ಅಪರಾಧಿಗಳಲೊಬ್ಬನಾದ ವಿನಯ್ ಶರ್ಮಾ ಗುರುವಾರ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
6 ಆರೋಪಿಗಳಲ್ಲಿ ಒಬ್ಬ ಸಾವನ್ನಪ್ಪಿದ್ದರೆ, ಬಾಲಾಪರಾಧಿ 3 ತಿಂಗಳ ಶಿಕ್ಷೆಯನ್ನು ಅನುಭವಿಸಿ ಕಳೆದ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿದ್ದಾನೆ. ಪ್ರಮುಖ ಆರೋಪಿ ಬಸ್ ಚಾಲಕ ರಾಮ್ ಸಿಂಗ್ 2013ರಲ್ಲಿ ಇದೇ ಜೈಲಿನಲ್ಲಿಯೇ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ.
ಶರ್ಮಾ ಜತೆ ಅಕ್ಷಯ್ ಠಾಕೂರ್, ಮುಖೇಶ್, ಪವನ್ ಗುಪ್ತಾ ಮತ್ತು ಇತರ ಮೂವರು ಮರಣದಂಡನೆಗೊಳಗಾಗಿದ್ದು ತಿಹಾರ್ ಜೈಲಿನಲ್ಲಿದ್ದಾರೆ.